ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಯಾಸೀನ್ ಬಾಗೊಡೆ (21) ಮತ್ತು ಹೀನಾ (19) ಕೊಲೆಗೀಡಾದವರು. ತೌಫಿಕ್ ಕ್ಯಾಡಿ ಕೊಲೆ ಮಾಡಿದ ಆರೋಪಿ.
ಕೊಲೆ ಮಾಡುವ ವೇಳೆ ಅಡ್ಡಬಂದ ಅಮಿನಾಬಾಯಿ ಬಾಗೊಡೆ ಹಾಗೂ ಮುಸ್ತಫಾ ಮುಲ್ಲಾ ಮೇಲೂ ಆರೋಪಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಪರಿಣಾಮ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕೊಲೆಯಾದ ಹೀನಾಳನ್ನ ಆರೋಪಿ ತೌಫಿಕ್ ಜೊತೆ 4 ತಿಂಗಳ ಹಿಂದೆ ಮದುವೆ ಮಾಡಲಾಗಿತ್ತು. ಆದರೆ ಮದುವೆಯಾಗಿ ಕೆಲ ತಿಂಗಳಿಗೆ ತಾನು ಈ ಹಿಂದೆ ಪ್ರೀತಿ ಮಾಡುತ್ತಿದ್ದ ಯಾಸೀನ್ ಎಂಬಾತನ ಜೊತೆ ಹೀನಾ ಓಡಿ ಹೋಗಿದ್ದಳು.
ಒಂದೂವರೆ ತಿಂಗಳ ಬಳಿಕ ಕೆಲ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು, ಪತಿ ತೌಫಿಕ್ ಜೊತೆ ವಿವಾಹ ಮುರಿದು ಯಾಸೀನ್ ಜೊತೆ ಮದುವೆ ಮಾಡಿಸಿದ್ದರು.
ಇದರಿಂದ ತೌಫಿಕ್ ಕೋಪಿತಗೊಂಡು ಯಾಸೀನ್ ಮನೆಗೆ ತೆರಳಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಹೋಗಿವುದಾಗಿ ಹೇಳಿ ಪರಾರಿಯಾಗಿದ್ದಾನೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…