ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಯಾಸೀನ್ ಬಾಗೊಡೆ (21) ಮತ್ತು ಹೀನಾ (19) ಕೊಲೆಗೀಡಾದವರು. ತೌಫಿಕ್ ಕ್ಯಾಡಿ ಕೊಲೆ ಮಾಡಿದ ಆರೋಪಿ.
ಕೊಲೆ ಮಾಡುವ ವೇಳೆ ಅಡ್ಡಬಂದ ಅಮಿನಾಬಾಯಿ ಬಾಗೊಡೆ ಹಾಗೂ ಮುಸ್ತಫಾ ಮುಲ್ಲಾ ಮೇಲೂ ಆರೋಪಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಪರಿಣಾಮ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕೊಲೆಯಾದ ಹೀನಾಳನ್ನ ಆರೋಪಿ ತೌಫಿಕ್ ಜೊತೆ 4 ತಿಂಗಳ ಹಿಂದೆ ಮದುವೆ ಮಾಡಲಾಗಿತ್ತು. ಆದರೆ ಮದುವೆಯಾಗಿ ಕೆಲ ತಿಂಗಳಿಗೆ ತಾನು ಈ ಹಿಂದೆ ಪ್ರೀತಿ ಮಾಡುತ್ತಿದ್ದ ಯಾಸೀನ್ ಎಂಬಾತನ ಜೊತೆ ಹೀನಾ ಓಡಿ ಹೋಗಿದ್ದಳು.
ಒಂದೂವರೆ ತಿಂಗಳ ಬಳಿಕ ಕೆಲ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು, ಪತಿ ತೌಫಿಕ್ ಜೊತೆ ವಿವಾಹ ಮುರಿದು ಯಾಸೀನ್ ಜೊತೆ ಮದುವೆ ಮಾಡಿಸಿದ್ದರು.
ಇದರಿಂದ ತೌಫಿಕ್ ಕೋಪಿತಗೊಂಡು ಯಾಸೀನ್ ಮನೆಗೆ ತೆರಳಿ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡಿ, ಪೊಲೀಸ್ ಠಾಣೆಗೆ ಹೋಗಿವುದಾಗಿ ಹೇಳಿ ಪರಾರಿಯಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…