ತಾಯಿಯೊಬ್ಬರು ತನಗೆ ಸಕ್ಕರೆ ಕಾಯಿಲೆ ಬಂದಿದೆ ಇನ್ನು ಬದುಕುವುದಿಲ್ಲ ಎಂದು ಹೆದರಿ ತನ್ನ ಇಬ್ಬರು ಅಂಗವಿಕಲ & ಬುದ್ಧಿಮಾಂದ್ಯ ಮಕ್ಕಳಿಗೆ ಸೀರೆಯಿಂದ ನೇಣು ಹಾಕಿ ಕೊಲೆ ಮಾಡಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮೃತ ದುರ್ದೈವಿಗಳು.
ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಕಳೆದ ರಾತ್ರಿ ಭೇಟಿ ಮಾಡಿ ಸ್ಥಳದ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…