ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.

ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.

ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.

ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

51 minutes ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

1 hour ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

4 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

13 hours ago