ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.

ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.

ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.

ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

50 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago