ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.

ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.

ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.

ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

42 minutes ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

4 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

19 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

23 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

23 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago