”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.
ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.
ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.
ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.
ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…