ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್‌ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್‌ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್‌ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.

ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್‌ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.

ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.

ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago