”ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು ಈ ವಿಷಯವನ್ನು ಸಂಸತ್ತನಿಲ್ಲಿ ಪ್ರಸ್ತಾಪ ಮಾಡಿದಾಗೆಲ್ಲಾ ಮೈಕ್ಗಳ ಸ್ವಿಚ್ ಆಫ್ ಮಾಡಲಾಗುತ್ತದೆ ಹಾಗೂ ಸದನದಲ್ಲಿ ಗದ್ದಲ ಸ್ಫೋಟಗೊಳ್ಳುತ್ತದೆ” ಎಂದು ಎಎಪಿ ಹಾಗೂ ಬಿಆರ್ಎಸ್ ಸದಸ್ಯರ ಉಪಸ್ಥಿತಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
“ಸದನದ (ರಾಜ್ಯಸಭೆ) ಭಾಗವೇ ಅಲ್ಲದವರ ಬಗ್ಗೆ ಅವರು ಹೇಗೆ ಪ್ರಶ್ನೆಗಳನ್ನು ಕೇಳುತ್ತಾರೆ? ಸಭಾ ನಾಯಕರು 10 ನಿಮಿಷಗಳ ಕಾಲ ಮಾತನಾಡಿದರು ಹಾಗೂ ಪ್ರತಿಪಕ್ಷಗಳ ನಾಯಕನಿಗೆ ಕೇವಲ 2 ನಿಮಿಷಗಳನ್ನು ನೀಡಲಾಯಿತು. ಇದು ಯಾವ ನಿಯಮ? ಇದು ಪ್ರಜಾಪ್ರಭುತ್ವದ ಅಂತ್ಯ. ಅದನ್ನೇ ರಾಹುಲ್ ಗಾಂಧಿಪ ಅವರು ಸೆಮಿನಾರ್ನಲ್ಲಿ ಹೇಳಿದರು” ಎಂದು ರಾಜ್ಯಸಭೆಯ ವಿಪಕ್ಷಗಳ ನಾಯಕ ಖರ್ಗೆ ಹೇಳಿದರು.
ಬಜೆಟ್ ಅಧಿವೇಶನದ ಎರಡನೇ ಹಂತವು ಬಿಜೆಪಿ ಹಾಗೂ ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳೊಂದಿಗೆ ಬಿರುಸಿನ ಆರಂಭಕ್ಕೆ ಕಾರಣವಾಯಿತು. ಲಂಡನ್ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಬಿಜೆಪಿಯು ವಾಗ್ದಾಳಿ ನಡೆಸಿದರೆ, ಪ್ರತಿಪಕ್ಷಗಳು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದವು.
ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಲಂಡನ್ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಯನ್ನು ಈ ಸದನದ ಎಲ್ಲ ಸದಸ್ಯರು ಖಂಡಿಸಬೇಕು ಮತ್ತು ಸದನದ ಮುಂದೆ ಕ್ಷಮೆಯಾಚಿಸಲು ಅವರನ್ನು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.
ಈ ಮಧ್ಯೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್, “(ನಾನು) ಸದನದಲ್ಲಿ ಯಾರನ್ನೂ ಮಾತನಾಡದಂತೆ ತಡೆದಿಲ್ಲ” ಎಂದು ಹೇಳಿದ್ದಾರೆ.
ಕಳೆದ ವಾರ ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿಯವರು, ಭಾರತೀಯ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಹೇಳಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…