ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.
ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.
ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…