ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.
ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.
ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…