ಅದ್ಧೂರಿಯಾಗಿ ನಡೆದ ಕಾಮೇನಹಳ್ಳಿ ಗುಟ್ಟೆ ಲಕ್ಷ್ಮಿನರಸಿಂಹ ಜಾತ್ರಾಮಹೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.

ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.

ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.

ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

57 minutes ago

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…

4 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

15 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

18 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

21 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

1 day ago