ಅದ್ಧೂರಿಯಾಗಿ ನಡೆದ ಕಾಮೇನಹಳ್ಳಿ ಗುಟ್ಟೆ ಲಕ್ಷ್ಮಿನರಸಿಂಹ ಜಾತ್ರಾಮಹೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.

ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.

ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.

ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

3 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

4 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

6 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago