ಅದ್ಧೂರಿಯಾಗಿ ನಡೆದ ಕಾಮೇನಹಳ್ಳಿ ಗುಟ್ಟೆ ಲಕ್ಷ್ಮಿನರಸಿಂಹ ಜಾತ್ರಾಮಹೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.

ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.

ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.

ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago