ಅದ್ಧೂರಿಯಾಗಿ ನಡೆದ ಕಾಮೇನಹಳ್ಳಿ ಗುಟ್ಟೆ ಲಕ್ಷ್ಮಿನರಸಿಂಹ ಜಾತ್ರಾಮಹೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಮೇನಹಳ್ಳಿ ಸಮೀಪದ ಗುಟ್ಟೆ ಲಕ್ಷ್ಮಿನರಸಿಂಹ ಕ್ಷೇತ್ರದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅಂಕುರಾರ್ಪಣೆ, ಧ್ವಜಸಂಕಲ್ಪ, ಸುದರ್ಶನ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕದರಿ ಹುಣ್ಣಿಮೆ ಪ್ರಯುಕ್ತ ಮಧ್ಯಾಹ್ನ 12.8ಕ್ಕೆ ರಥೋತ್ಸವ ನೆರವೇರಿತು.

ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಿ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಪಾನಕ ಸೇವೆ, ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.

ದೇವಾಲಯಕ್ಕೆ ತೆರಳಲು ಭಕ್ತರು ಖಾಸಗಿ ವಾಹನ, ಆಟೊಗಳ ಮೊರೆ ಹೋಗಿದ್ದರು. ಸಂಜೆ ಪಚ್ಚಾರಲಹಳ್ಳಿ, ಕಾಮೇನಹಳ್ಳಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕ ಗುಂಡಪ್ಪನಾಯಕನಹಳ್ಳಿ, ಸಿಂಗ್ರಯ್ಯನಪಾಳ್ಯ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಗೆಮಾಚೇನಹಳ್ಳಿ, ಬನವತಿ, ದಡಘಟ್ಟಮೊಡಗು, ಗೌಡನಕುಂಟೆ, ಕರೇಕಲ್ಲಹಳ್ಳಿ, ಹಾರೋಹಳ್ಳಿ, ಲಿಂಗದವೀರನಹಳ್ಳಿ, ಸೋಮಶೆಟ್ಟಿಹಳ್ಳಿ, ನಾಚಕುಂಟೆ, ತರಿದಾಳು, ನಾಗತೇನಹಳ್ಳಿ, ಇಂದಿರಾನಗರ, ಬೇವಿನಹಳ್ಳಿ, ಕುಕ್ಕಲಹಳ್ಳಿ, ಉಜ್ಜನಿ, ಸಾಸಲು ಗ್ರಾಮಗಳಿಂದ ಆಕರ್ಷಕ ದೀಪದಾರತಿ, ಪಟಾಕಿ, ಬಾಣಬಿರುಸುಗಳ ಪ್ರದರ್ಶನ ನಡೆಯಿತು.

ಮಾರ್ಚ್ 4 ರಂದು ಬೆಳಿಗ್ಗೆ ಜಾತ್ರಾ ಮಹೋತ್ಸವದ ಜಲಧಿ ಕಾರ್ಯಕ್ರಮ, ಬಾಳೆಮರ ಅಂಬು ಹಾಕುವ ಮೂಲಕ ಶಾಂತಿ ಸಂಪನ್ನ, ಹೋಳಿ ಹಬ್ಬದ ಪ್ರಯುಕ್ತ ಬಣ್ಣದ ಓಕುಳಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ರಾತ್ರಿ 8ಕ್ಕೆ ಗುಟ್ಟೆ ಲಕ್ಷ್ಮಿನರಸಿಂಹಸ್ವಾಮಿ ನಾಟಕ ಮಂಡಳಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

15 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

16 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

22 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago