ಅದ್ಧೂರಿಯಾಗಿ ನಡೆದ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವ: ಕರಗದ ನೃತ್ಯದ ಹೆಜ್ಜೆಗೆ ಭಾವಪರವಶರಾದ ಜನ

ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.

ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೆ ಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.

14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.

ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.

ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್‌ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.

Ramesh Babu

Journalist

Recent Posts

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

27 minutes ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

4 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

5 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago