ಅದ್ಧೂರಿಯಾಗಿ ನಡೆದ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವ: ಕರಗದ ನೃತ್ಯದ ಹೆಜ್ಜೆಗೆ ಭಾವಪರವಶರಾದ ಜನ

ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.

ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೆ ಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.

14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.

ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.

ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್‌ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago