ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.
ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.
ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.
14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.
ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.
ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…