ಅದ್ಧೂರಿಯಾಗಿ ನಡೆದ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವ: ಕರಗದ ನೃತ್ಯದ ಹೆಜ್ಜೆಗೆ ಭಾವಪರವಶರಾದ ಜನ

ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.

ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೆ ಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.

14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.

ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.

ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್‌ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago