ಅದ್ಧೂರಿಯಾಗಿ ನಡೆದ ಸಪ್ತಮಾತೃಕ ಮಾರಿಯಮ್ಮ ಕರಗ ಮಹೋತ್ಸವ: ಕರಗದ ನೃತ್ಯದ ಹೆಜ್ಜೆಗೆ ಭಾವಪರವಶರಾದ ಜನ

ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.

ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.

ನಗರದ ಗಗನಾರ್ಯಸ್ವಾಮಿ ಮಠದಿಂದ ಹೊರಟ ಉತ್ಸವ ಹಳೆ ಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಾಲಯ, ಏಳುಸುತ್ತಿನ ಕೋಟೆ, ತೂಬಗೆರೆ ಪೇಟೆ, ವನ್ನಿಗರಪೇಟೆ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ದೇವಾಲಯದ ಬಳಿ ಆಗಮಿಸಿತು.

ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.

14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.

ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.

ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್‌ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 minutes ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

17 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

18 hours ago