ದೊಡ್ಡಬಳ್ಳಾಪುರ ನಗರದ ವನ್ನಿಗರಪೇಟೆ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಕರಗ ಮಹೋತ್ಸವ.
ಕುಪ್ಪಂನ ಪೂಜಾರಿ ಮುನಿರತ್ನಂ ಬಾಲಾಜಿ ಕರಗ ಹೊತ್ತು ಕರಗದ ಧಾರ್ಮಿಕ ವಿಧಿ ನೆರವೇರಿಸಿದರು. ಕರಗ ಉತ್ಸವವನ್ನು ಸಾವಿರಾರು ಭಕ್ತರು ಜನ ವೀಕ್ಷಿಸಿ, ಕರಗದ ನೃತ್ಯದ ಹೆಜ್ಜೆಗೆ ಭಕ್ತಾದಿಗಳು ಭಾವಪರವಶರಾದರು.
ಮಾರಿಯಮ್ಮ ಕರಗ ಮಹೋತ್ಸವ ಹಿನ್ನೆಲೆ ದೇವಾಲಯವನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು.
14 ವರ್ಷಗಳಿಂದ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡುನಲ್ಲಿಯೂ ಕರಗ ಹೊತ್ತಿರುವ ಆಂಧ್ರಪ್ರದೇಶದ ಕುಪ್ಪಂ ಪೂಜಾರಿ ಮುನಿರತ್ನಂ ಬಾಲಾಜಿ, 5ನೇ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕರಗ ಹೊತ್ತಿದ್ದರು. ಕರಗ ಅಂಗವಾಗಿ ನಗರದ ವಿವಿಧೆಡೆ ಪೂಜೆ ಪ್ರಸಾದ ವಿನಿಯೋಗ ನಡೆಯಿತು.
ಕರಗ ಮಹೋತ್ಸವ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಮೇ 14 ರಂದು ಸಂಜೆ 4ಕ್ಕೆ ಒನಕೆ ನಾಟ್ಯ ಮತ್ತು ವಸಂತೋತ್ಸವ ನಡೆಯಲಿದೆ.
ನಗರದ ವಿವಿಧ ವೃತ್ತಗಳಲ್ಲಿ ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕೃತ ಬೃಹತ್ ಕಟೌಟ್ಗಳು ಕರಗದ ಸಂಭ್ರಮಕ್ಕೆ ಮೆರುಗು ನೀಡಿವೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…