ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಕೆಂಪೇಗೌಡರ ಜಯಂತೋತ್ಸವ, ತಾಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮವನ್ನು ಜೂನ್ 27ರಂದು ನಗರದ ಒಕ್ಕಲಿಗರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಒಕ್ಕಲಿಗ ಸಮುದಾಯದ ಮುಖಂಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ ತಿಳಿಸಿದರು.
ಈ ಕುರಿತು ನಗರದ ಪಿಎಲ್ ಡಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜೂ.27ರ ಬೆಳಗ್ಗೆ 10ಗಂಟೆಗೆ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಡೊಳ್ಳು ಕುಣಿತದೊಂದಿಗೆ ಕೆಂಪೇಗೌಡರ ಭಾವಚಿತ್ರ ಹಾಗೂ ಪುತ್ಥಳಿ ಹೊತ್ತ ಬೆಳ್ಳಿರಥ ಮೆರವಣಿಗೆ ಪ್ರಾರಂಭವಾಗಿ ತಾಲೂಕು ಕಚೇರಿ ಬಳಿ ಬಂದು ಸರ್ಕಾರಿ ಗೌರವಗಳೊಂದಿಗೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಅಲ್ಲಿಂದ ಮೆರವಣಿಗೆ ಸಾಗಿ ಮುಂದೆ ಜಿ.ರಾಮೇಗೌಡ ವೃತ್ತಕ್ಕೆ ಬಂದು ತದನಂತರ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಒಕ್ಕಲಿಗರ ಭವನದ ಬಳಿ ಮೆರವಣಿಗೆ ಅಂತ್ಯಗೊಳ್ಳಲಿದೆ.
ಒಕ್ಕಲಿಗರ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ, ತಾಲೂಕಿನ ಪ್ರಗತಿ ಪರ ರೈತರಿಗೆ, ಖ್ಯಾತ ಕಲಾವಿದರಿಗೆ ಸನ್ಮಾನ ನಡೆಸಲಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜಕೀಯ ಪ್ರತಿನಿಧಿಗಳು, ಅಧಿಕಾರಿಗಳು, ಒಕ್ಕಲಿಗ ಸಮಾಜದ ಪ್ರಮುಖ ಗಣ್ಯರು, ಮುಖಂಡರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು
ಈ ವೇಳೆ ಮುಖಂಡರಾದ ಬಿ.ಸಿ .ನಾರಾಯಣಸ್ವಾಮಿ, ಅಶ್ವಥ್ ನಾರಾಯಣ, ಅಂಬರೀಶ್, ಮುನಿರಾಜು ಸೇರಿದಂತೆ ಮತ್ತಿತರರು ಇದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…