ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಕೆಂಪೇಗೌಡರ ಜಯಂತೋತ್ಸವ, ತಾಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮವನ್ನು ಜೂನ್ 27ರಂದು ನಗರದ ಒಕ್ಕಲಿಗರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಒಕ್ಕಲಿಗ ಸಮುದಾಯದ ಮುಖಂಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ ತಿಳಿಸಿದರು.
ಈ ಕುರಿತು ನಗರದ ಪಿಎಲ್ ಡಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜೂ.27ರ ಬೆಳಗ್ಗೆ 10ಗಂಟೆಗೆ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಡೊಳ್ಳು ಕುಣಿತದೊಂದಿಗೆ ಕೆಂಪೇಗೌಡರ ಭಾವಚಿತ್ರ ಹಾಗೂ ಪುತ್ಥಳಿ ಹೊತ್ತ ಬೆಳ್ಳಿರಥ ಮೆರವಣಿಗೆ ಪ್ರಾರಂಭವಾಗಿ ತಾಲೂಕು ಕಚೇರಿ ಬಳಿ ಬಂದು ಸರ್ಕಾರಿ ಗೌರವಗಳೊಂದಿಗೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಅಲ್ಲಿಂದ ಮೆರವಣಿಗೆ ಸಾಗಿ ಮುಂದೆ ಜಿ.ರಾಮೇಗೌಡ ವೃತ್ತಕ್ಕೆ ಬಂದು ತದನಂತರ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಒಕ್ಕಲಿಗರ ಭವನದ ಬಳಿ ಮೆರವಣಿಗೆ ಅಂತ್ಯಗೊಳ್ಳಲಿದೆ.
ಒಕ್ಕಲಿಗರ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ, ತಾಲೂಕಿನ ಪ್ರಗತಿ ಪರ ರೈತರಿಗೆ, ಖ್ಯಾತ ಕಲಾವಿದರಿಗೆ ಸನ್ಮಾನ ನಡೆಸಲಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜಕೀಯ ಪ್ರತಿನಿಧಿಗಳು, ಅಧಿಕಾರಿಗಳು, ಒಕ್ಕಲಿಗ ಸಮಾಜದ ಪ್ರಮುಖ ಗಣ್ಯರು, ಮುಖಂಡರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು
ಈ ವೇಳೆ ಮುಖಂಡರಾದ ಬಿ.ಸಿ .ನಾರಾಯಣಸ್ವಾಮಿ, ಅಶ್ವಥ್ ನಾರಾಯಣ, ಅಂಬರೀಶ್, ಮುನಿರಾಜು ಸೇರಿದಂತೆ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…