Categories: ಕೋಲಾರ

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸಮುದಾಯದ ಮುಖಂಡರ ನಿರ್ಧಾರ

ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು 120ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆಯನ್ನು ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶವನ್ನು ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.

ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.

ಸಭೆಯಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್ ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

2 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

2 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

3 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

5 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

13 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

13 hours ago