Categories: ಕೋಲಾರ

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸಮುದಾಯದ ಮುಖಂಡರ ನಿರ್ಧಾರ

ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು 120ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆಯನ್ನು ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶವನ್ನು ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.

ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.

ಸಭೆಯಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್ ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago