Categories: ಕೋಲಾರ

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸಮುದಾಯದ ಮುಖಂಡರ ನಿರ್ಧಾರ

ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು 120ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆಯನ್ನು ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶವನ್ನು ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.

ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.

ಸಭೆಯಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್ ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago