ಕೋಲಾರ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿಯ ಸಹಕಾರದೊಂದಿಗೆ ಅ.17 ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.
ನಗರದ ಹೊರವಲಯದ ಶ್ರೀನಿವಾಸಪುರ ರಸ್ತೆಯ ಆರ್.ಜಿ ಲೇಔಟ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿಯು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಯೋಜನೆ ಮಾಡಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಕೋಲಾರ ತಾಲೂಕಿನಿಂದ ಸುಮಾರು 120ಕ್ಕೂ ಹೆಚ್ಚು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಪಲ್ಲಕ್ಕಿಗಳ ಮೆರವಣಿಗೆಯನ್ನು ಸಹ ಅದ್ಧೂರಿಯಾಗಿ ನಡೆಸಲು ಪ್ರತಿ ಹಳ್ಳಿಯಿಂದ ಬರುವಂತೆ ನೋಡಿಕೊಳ್ಳಬೇಕು ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ ಮುಖಂಡರನ್ನು ಹಾಗೂ ಸಂಘಟನೆಗಳನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ನಾಡು ಎಂಬುವ ಸಂದೇಶವನ್ನು ಸಾರುವ ರೀತಿಯಲ್ಲಿ ಆಚರಿಸೋಣ ಎಂದರು.
ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿರುವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಚರ್ಚಿಸಬೇಕು ಜೊತೆಗೆ ಸಮುದಾಯದ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ಸಭೆಯಲ್ಲಿ ತರುವಂತೆ ನಿರ್ಧರಿಸಲಾಯಿತು.
ಸಭೆಯಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್, ಮುಖಂಡರಾದ ಬಾಲಗೋವಿಂದ್, ಮಾಲೂರು ಎನ್ ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ರಾಜಣ್ಣ, ಬೈರಂಡಹಳ್ಳಿ ನಾಗೇಶ್, ಅಡ್ಡಗಲ್ ನರೇಶ್, ನರಸಿಂಹಪ್ಪ, ಕಮಾಂಡಹಳ್ಳಿ ನಾರಾಯಣಸ್ವಾಮಿ, ಭುವನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…