ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಈ ಸಂಬಂಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗವು ಆರ್ಟಿಕಲ್ 326, ಆರ್ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. UIDAI ಮತ್ತು ECI ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಆದ್ದರಿಂದ, EPIC ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು.
ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…