ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5,000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2,600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ ಎಂದರು.
ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ. ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಈ ವಿಷಯದಲ್ಲಿ ಅನುಮಾನವೇ ಬೇಡ ಎಂದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…