ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5,000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2,600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ ಎಂದರು.
ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ. ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಈ ವಿಷಯದಲ್ಲಿ ಅನುಮಾನವೇ ಬೇಡ ಎಂದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…