ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5,000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2,600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ ಎಂದರು.
ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ. ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಈ ವಿಷಯದಲ್ಲಿ ಅನುಮಾನವೇ ಬೇಡ ಎಂದರು.
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…