ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಅವರು ಮಾತನಾಡಿದರು.
ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ. ಆದರೂ ಮೊದಲು 5,000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3,000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2,600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ ಎಂದರು.
ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟು ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ. ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಈ ವಿಷಯದಲ್ಲಿ ಅನುಮಾನವೇ ಬೇಡ ಎಂದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…