ಕೋಲಾರ: ಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಅವತ್ತು ಸುಮ್ಮನೆ ಇದ್ದು ಇವತ್ತು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು ಎಂದು ವರ್ತೂರು ಪ್ರಕಾಶ್ ಮತ್ತು ಸಿ.ಎಸ್ ವೆಂಕಟೇಶ್ ವಿರುದ್ದ ವಾಗ್ದಾಳಿ ನಡೆಸಿದರು
ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು
ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಸ ಕೊಡಬೇಡಿ ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು
ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…