Categories: ಕೋಲಾರ

ಅಧಿಕಾರವಿದ್ದಾಗ ಸುಮ್ಮನೆ ಇದ್ದು ಚುನಾವಣೆ ಬಂದಾಗ ರಾಜಕೀಯ ಗಿಮಿಕ್ ಮಾಡಲು ಹೊರಟಿದ್ದಾರೆ – ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ

ಕೋಲಾರ: ಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಅವತ್ತು ಸುಮ್ಮನೆ ಇದ್ದು ಇವತ್ತು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು ಎಂದು ವರ್ತೂರು ಪ್ರಕಾಶ್ ಮತ್ತು ಸಿ.ಎಸ್ ವೆಂಕಟೇಶ್ ವಿರುದ್ದ ವಾಗ್ದಾಳಿ ನಡೆಸಿದರು

ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು

ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಸ ಕೊಡಬೇಡಿ ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

1 hour ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

6 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

7 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

17 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

18 hours ago