ಕೋಲಾರ: ಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಅವತ್ತು ಸುಮ್ಮನೆ ಇದ್ದು ಇವತ್ತು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು ಎಂದು ವರ್ತೂರು ಪ್ರಕಾಶ್ ಮತ್ತು ಸಿ.ಎಸ್ ವೆಂಕಟೇಶ್ ವಿರುದ್ದ ವಾಗ್ದಾಳಿ ನಡೆಸಿದರು
ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು
ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಸ ಕೊಡಬೇಡಿ ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು
ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…