Categories: ಕೋಲಾರ

ಅಧಿಕಾರವಿದ್ದಾಗ ಸುಮ್ಮನೆ ಇದ್ದು ಚುನಾವಣೆ ಬಂದಾಗ ರಾಜಕೀಯ ಗಿಮಿಕ್ ಮಾಡಲು ಹೊರಟಿದ್ದಾರೆ – ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ

ಕೋಲಾರ: ಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಅವತ್ತು ಸುಮ್ಮನೆ ಇದ್ದು ಇವತ್ತು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು ಎಂದು ವರ್ತೂರು ಪ್ರಕಾಶ್ ಮತ್ತು ಸಿ.ಎಸ್ ವೆಂಕಟೇಶ್ ವಿರುದ್ದ ವಾಗ್ದಾಳಿ ನಡೆಸಿದರು

ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು

ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಸ ಕೊಡಬೇಡಿ ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

14 hours ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

15 hours ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

15 hours ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

21 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

1 day ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 day ago