ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು(ಆರ್.ಟಿ.ಐ) ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಡಾ. ಹರೀಶ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ 2005 ರನ್ವಯ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು

ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪ ಹೊತ್ತಾಗಿದ್ದು ಸರ್ಕಾರವನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು.

ಅರ್ಜಿದಾರರು ಕೂಡ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳದೆ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅರ್.ಟಿ ಐ ಮೂಲಕ ಸಾರ್ವಜನಿಕರು ಮಾಹಿತಿ ಕೇಳಬೇಕು.

ಮುಖ್ಯ ವಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಹಣಕಾಸು, ನರೇಗಾ, ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆಗಳಲ್ಲಿ ಹೆಚ್ಚು ಆರ್.ಟಿ.ಐ ಅರ್ಜಿಗಳು ಬರುತ್ತವೆ. ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ಎಂದರು.

ಪೊಲೀಸ್ ಸ್ಟೇಷನ್ ಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂಬ ಸುಪ್ರೀಂಕೋರ್ಟ್ ಹೇಳಿಕೆಯನ್ನು ಆಧರಿಸಿ ಕಡ್ಡಾಯವಾಗಿ ಎಲ್ಲಾ ಪೊಲೀಸ್ ಸ್ಟೇಷನ್ಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಹಾಗೆಯೇ ಅವುಗಳನ್ನು ಒಂದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕ ಎಂದರು.

ಮಾಹಿತಿ ಅಧಿಕಾರಿಯು ಯಾವುದೇ ಕಾರಣವಿಲ್ಲದೇ ಮಾಹಿತಿಯನ್ನು ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಾಲಕಾಲಕ್ಕೆ ಅರ್ಜಿಗಳ ವಿಲೇವಾರಿ ಮಾಡಬೇಕು ಎಂದರು.

*ಆರ್.ಟಿ.ಐ ಸಾರ್ವಜನಿಕ ಕಾಯ್ದೆ, ಜನಸ್ನೇಹಿ ಕಾಯ್ದೆ*
ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಡಾ.ಮಮತ ಬಿ.ಆರ್ ಅವರು ಮಾತನಾಡಿ ಮಾಹಿತಿ ಹಕ್ಕಿನ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅರಿವಿನ ಕೊರತೆ ಇದೆ. ಈ ಕಾಯ್ದೆಯು ಸಾರ್ವಜನಿಕ ಜನ ಸ್ನೇಹಿ ಕಾಯ್ದೆಯಾಗಿದೆ. ಇದನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. 6(1) ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಅರ್ಜಿ ಬಂದರೆ ಅಂತಹ ಅರ್ಜಿಗೆ 30 ದಿನಗಳ ಒಳಗಾಗಿ ಪ್ರತಿ ಪುಟಕ್ಕೆ ಎರಡು ರೂ ಗಳಂತೆ ಹಣ ಪಾವತಿಸಿಕೊಂಡು ಮಾಹಿತಿ ನೀಡಬೇಕು, ನಿಗದಿತ ಕಾಲಮಾನಕ್ಕೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಉಚಿತವಾಗಿ ಮಾಹಿತಿಯನ್ನು ನೀಡಬೇಕು. 41ಎ ಮತ್ತು 41ಬಿ ಯನ್ನು ಎಲ್ಲಾ ಕಚೇರಿಗಳಲ್ಲಿ ಕಡ್ದಾಯವಾಗಿ ಅಳವಡಿಸಬೇಕು. ಅಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿಗಳು ನೀಡಬೇಕು ಕಾಯ್ದೆಯ ನಿರ್ಲಕ್ಷ್ಯತೆ ಆಗಬಾರದು ಎಂದರು.

*ಜಿಲ್ಲೆಯಲ್ಲಿ 1440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ*

ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ, ಅವರು ಮಾತನಾಡಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂಪೂರ್ಣ ಅರಿವು ಹೊಂದಿದ್ದಲ್ಲಿ ಮಾತ್ರ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಸಮರ್ಪಕ ಮಾಹಿತಿ ಒದಗಿಸಲು ಸಾಧ್ಯ. ರಾಜ್ಯದಲ್ಲಿ 45000 ದ್ವಿತೀಯ ಹಂತದ ಮೇಲ್ಮನವಿ ಪ್ರಕರಣಗಳು ಬಾಕಿ ಇದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 9 ನೇ ಸ್ಥಾನದೊಂದಿಗೆ 1440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ಹೇಳಿದರು.

ಹಾಗೆ ಕಾಯ್ದೆಯು ಬಹಳ ಸುಲಭವಾಗಿದ್ದು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡರೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬಹುದು. ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ಹಕ್ಕು ಅಡಿಯಲ್ಲಿ ಸುಪ್ರೀಂ ಇದ್ದಹಾಗೆ. ಮಾಹಿತಿ ಹಕ್ಕನ್ನು ಸರಿಯಾಗಿ ಅರ್ಥೈಸಿಕೊಂಡು ಶೀಘ್ರ ಬಗೆಹರಿಸಬಹುದಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅನಿವಾರ್ಯವಾಗಿದ್ದು ನಿಭಾಯಿಸುವುದು ನಮ್ಮ ಕರ್ತವ್ಯ. ನಿಷ್ಠಾವಂತ ಆರ್‌ಟಿಐ ಅರ್ಜಿದಾರರಿಗೆ ವಂಚಿತತೆ, ದುರ್ಬಳಕೆ ಆಗುತ್ತಿರುವುದನ್ನು ತಡೆಯುವುದು ನಮ್ಮ ಅಧಿಕಾರಿಗಳ ಕರ್ತವ್ಯ ಕೂಡ ಆಗಿದೆ ಎಂದರು.

ಜಿಲ್ಲಾಧಿಕಾರಿ ಎ ಬಿ ಬಸವರಾಜು ಅವರು ಮಾತನಾಡಿ ಕಂದಾಯ ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈಗ ಎಲ್ಲವೂ ಆನ್ಲೈನ್ ಅಲ್ಲಿ ಸಿಗುವಂತೆ ಮಾಡಲಾಗಿದೆ. ನ್ಯಾಯಲಯಕ್ಕೆ ಸಂಬಂಧಪಟ್ಟ ಮಾಹಿತಿಗಾಗಿ ಆರ್.ಸಿ.ಸಿ.ಎಂ.ಎಸ್ ಪೋರ್ಟಲ್ ಮತ್ತು ಭೂಮಿಗೆ ಸಂಬಂಧಪಟ್ಟ ಮಾಹಿತಿಗಾಗಿ ಭೂ ಸುರಕ್ಷಾ ಪೋರ್ಟಲ್ ಅಲ್ಲಿ ಮಾಹಿತಿ ಪಡೆಯಬಹುದು ಸರ್ವೆ ದಾಖಲೆ ಕೂಡ ಈಗ ಸಿಗುತ್ತದೆ ಎಂದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ.ಎನ್ ಅನುರಾಧಾ, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಎಎಸ್ಪಿ ನಾಗರಾಜ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಪ್ರಥಮ ಮೇಲ್ಮನವಿ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

5 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

15 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

15 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago