Categories: ಕೋಲಾರ

ಅಧಿಕಾರಿಗಳಿಗೆ ಜಾತಿ ಪಟ್ಟ: ಶಾಸಕರ ಕ್ರಮಕ್ಕೆ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ನಾರಾಯಣಗೌಡ ಖಂಡನೆ

ಕೋಲಾರ: ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಆಧಾರದ ಮೇರೆಗೆ ಅಧಿಕಾರಿಯಾಗಿ ನೇಮಕ ಆಗಿರುವವರಿಗೆ ಜಿಲ್ಲೆಯ ಕೆಲ ಶಾಸಕರು ಜಾತಿ ಪಟ್ಟ ಕಟ್ಟುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ನಾರಾಯಣಗೌಡ ಖಂಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಸಂವಿಧಾನ ಅಡಿಯಲ್ಲಿ ಶಾಸಕರಾದವರು ಪ್ರಜಾಪ್ರಭುತ್ವದಲ್ಲಿ ಪ್ರಜಾ ಸೇವಕರಾಗಿರಬೇಕು ಅದನ್ನು ಬಿಟ್ಟು ನಮ್ಮ ಜಾತಿ ನಿಮ್ಮ ಜಾತಿ ಎಂದು ಅಧಿಕಾರಿಗಳ ನೇಮಕದಲ್ಲಿ ಹೇಳಿಕೆ ನೀಡುವುದು ನ್ಯಾಯವೆ ಎಂದು ಪ್ರಶ್ನೆ ಮಾಡಿದರು.

ಯಾರು ಸಹ ಹುಟ್ಟುತ್ತಾ ಜಾತಿ ಪಟ್ಟ ಕಟ್ಟಿಕೊಂಡು ಬರುವುದಿಲ್ಲ, ಇದನ್ನೆಲ್ಲ ರಾಜಕೀಯ ಕುಳಗಳು ಸೃಷ್ಟಿ ಮಾಡಿರುವ ಸಮಾಜಿಕ ಪಿಡುಗು ಎಂದರೆ ತಪ್ಪಾಗಲಾರದು. ತಮ್ಮ ಸ್ವ ಹಿತಾಸಕ್ತಿಗಾಗಿ ಅಧಿಕಾರಿಗಳ ಗೌರವಕ್ಕೆ ಧಕ್ಕೆಯುಂಟು ಮಾಡುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.

ಎಎಎಸ್, ಐಪಿಎಸ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪರೀಕ್ಷೆಗಳನ್ನು ಎದುರಿಸಿ ಹುದ್ದೆಗೆ ಅಲಂಕರಿಸಿತ್ತಾರೆ. ಡಿಸಿ, ಎಸಿ, ಎಸ್ಪಿಗಳು ಎಂದೂ ಜಾತಿ ಅಧಾರದಲ್ಲಿ ಕೆಲಸ ಮಾಡುವುದಿಲ್ಲ. ಜಿಲ್ಲೆಯೆನಾದರು ಉದ್ದಾರ ಆಗಿದ್ದರೆ ಅದು ಅಧಿಕಾರಿಗಳಿಂದ ಮಾತ್ರ ಸಾಧ್ಯ ಜಿಲ್ಲಾ ಪಂಚಾಯಿತಿ ಸಿಇಒ ನಾಲ್ಕು ತಿಂಗಳಿಂದ ಇಲ್ಲ, ಜೊತೆಗೆ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿದೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಎಂದರೆ ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಒಣ ಗೇಡಿತನ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದರು.

ಹಿಂದೆ ಮನೋಜ್ ಕುಮಾರ್ ಮೀನಾ, ಡಿ.ಕೆ.ರವಿ, ಕೆ.ವಿ.ತ್ರಿಲೋಕ್ ಚಂದ್ರ ಅವರ ನಂತರ ಉತ್ತಮ ಕೆಲಸ ಮಾಡಿದ್ದು ಅಕ್ರಂ ಪಾಷ ಅವರು, ಸರ್ಕಾರಿ ಜಾಗ ಒತ್ತುವರಿಗೆ ಕೈ ಹಾಕಿದ ಹಿನ್ನಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ. ಮಾಲೂರು ನಂಜೇಗೌಡ.ಡಿಸಿ ಅವರನ್ನು ವರ್ಗಾವಣೆ ಮಾಡಿಸಲು ಹುನ್ನಾರ ಮಾಡುತ್ತಿದ್ದಾರೆ, ಇದು ಶಾಸಕ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು.

ನಾಲ್ಕು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾದರು ಉಸ್ತುವಾರಿ ಮಂತ್ರಿಯಾಗಲು ಅರ್ಹರಾಗಿಲ್ಲ, ಅಂತಹ ಸ್ಥಿತಿಯಲ್ಲಿ ಸುಮ್ಮನಿರದೆ ಅಧಿಕಾರಿಗಳನ್ನು ಎತ್ತಂಗಡಿ ಮಾಡುವ ಅವಶ್ಯಕತೆಯಿದಿಯೇ ಎಂದು ಪ್ರಶ್ನಿಸಿದರು.
ಜನಪ್ರತಿನಿಧಿಗಳು ಸರ್ಕಾರ ಜಮೀನು ಕಬಳಿಸುತ್ತಿದ್ದರೆ ನೋಡಿಕೊಂಡು ಸುಮ್ಮನಿರಲು ಅಧಿಕಾರಿಗಳೇನು ನಿಮ್ಮ ಹಿಂಬಾಲಕರಲ್ಲ, ನಿಮ್ಮನ್ನು ಪ್ರಶ್ನೆ ಮಾಡಿದರೆ ವರ್ಗಾವಣೆ ಮಾಡಿಸಿದರೆ ಮಾಡಿದ ತಪ್ಪಿನಿಂದ ಪಾರಾಗಲು ಸಾಧ್ಯವಿಲ್ಲ. ಒಂದಲ್ಲ ಒಂದು ದಿನ ತಲೆ ದಂಡ ತೆರೆಯಬೇಕು, ಜಾತಿವಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುವುದು ಬಿಟ್ಟು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ಕಿವಿಮಾತು ಹೇಳಿದರು.

Ramesh Babu

Journalist

Recent Posts

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

2 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

6 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

8 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 days ago