ಘಾಟಿ ಸುತ್ತಾಮುತ್ತಾ ಇರುವ ಸರ್ಕಾರಿ ಭೂಮಿಯನ್ನು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡುವುದಿಲ್ಲ. ನನ್ನ ನೇತೃತ್ವದಲ್ಲಿ ಅದು ನಡೆಯುವುದಿಲ್ಲ. ಇತ್ತೀಚೆಗೆ ಡೆವೆಲಪರ್ಸ್ ಈಚೆಗೆ ಬಂದಿದ್ದಾರೆ. ಈ ಭಾಗದಲ್ಲಿ ಜಮೀನುಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಅಲ್ವಾ ಅವರು ಮಾಡಿದ್ದಾರೋ ಅದು ನನಗೆ ಗೊತ್ತಿಲ್ಲ. ಆ ಡೆಲಪರ್ಸ್ ಮಾಡಿದ್ರೆ ಮಾಡಿರುತ್ತಾರೆ ಹೊರೆತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುವುದಿಲ್ಲ. ಒಂದು ವೇಳೆ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಬಡವರಿಗೆ ಜಮೀನು ಕೊಡಬೇಕು. ಫಾರಂ ನಂಬರ್ 53 ಹಾಗೂ 57 ಅರ್ಜಿಗಳನ್ನು ಹಾಕಿಕೊಂಡು ಸರ್ಕಾರಿ ಗೋಮಾಳದಲ್ಲಿ ರೈತರು ಉಳುಮೆ ಮಾಡುತ್ತಾ ಇರುತ್ತಾರೋ ಅಂತಹವರಿಗೆ ಜಮೀನು ಕೊಡಬೇಕಾಗುತ್ತದೆ ಎಂದು ಹೇಳುತ್ತಾ… ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಮರ್ಥಿಸಿಕೊಂಡರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…