ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಗೋಮಾಳ ಕಬಳಿಕೆ ಆರೋಪ‌: ಇದು ಸತ್ಯಕ್ಕೆ ದೂರವಾದದ್ದು- ನನ್ನ ನೇತೃತ್ವದಲ್ಲಿ ಅದು ನಡೆಯೋದಕ್ಕೆ ಸಾಧ್ಯವೇ ಇಲ್ಲ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ‌ ಹೇಳಿಕೆ

ಘಾಟಿ ಸುತ್ತಾಮುತ್ತಾ ಇರುವ ಸರ್ಕಾರಿ ಭೂಮಿಯನ್ನು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲಾಗುತ್ತಿದೆ ಎಂಬ ಆರೋಪ‌ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡುವುದಿಲ್ಲ. ನನ್ನ ನೇತೃತ್ವದಲ್ಲಿ ಅದು ನಡೆಯುವುದಿಲ್ಲ. ಇತ್ತೀಚೆಗೆ ಡೆವೆಲಪರ್ಸ್ ಈಚೆಗೆ ಬಂದಿದ್ದಾರೆ. ಈ ಭಾಗದಲ್ಲಿ ಜಮೀನುಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಅಲ್ವಾ ಅವರು ಮಾಡಿದ್ದಾರೋ ಅದು ನನಗೆ ಗೊತ್ತಿಲ್ಲ. ಆ ಡೆಲಪರ್ಸ್ ಮಾಡಿದ್ರೆ ಮಾಡಿರುತ್ತಾರೆ ಹೊರೆತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುವುದಿಲ್ಲ. ಒಂದು ವೇಳೆ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ಬಡವರಿಗೆ ಜಮೀನು ಕೊಡಬೇಕು. ಫಾರಂ ನಂಬರ್ 53 ಹಾಗೂ 57 ಅರ್ಜಿಗಳನ್ನು ಹಾಕಿಕೊಂಡು ಸರ್ಕಾರಿ ಗೋಮಾಳದಲ್ಲಿ ರೈತರು ಉಳುಮೆ ಮಾಡುತ್ತಾ ಇರುತ್ತಾರೋ ಅಂತಹವರಿಗೆ ಜಮೀನು ಕೊಡಬೇಕಾಗುತ್ತದೆ ಎಂದು ಹೇಳುತ್ತಾ… ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಮರ್ಥಿಸಿಕೊಂಡರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

2 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

13 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

18 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago