ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…