ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…