Categories: ರಾಜ್ಯ

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್: ರಾಜಕಾರಣಿಗಳ ಸೇವೆಗೆ ಅಧಿಕಾರಿಗಳ ಬಳಕೆ: ಇದು ಘೋರ ಅಪಚಾರ: ಕಾಂಗ್ರೆಸ್ ಸರಕಾರದ ನಡೆ ತಪ್ಪು- ಮಾಜಿ ಸಿಎಂ‌ ಕುಮಾರಸ್ವಾಮಿ

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ.

ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago