Categories: ರಾಜ್ಯ

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್: ರಾಜಕಾರಣಿಗಳ ಸೇವೆಗೆ ಅಧಿಕಾರಿಗಳ ಬಳಕೆ: ಇದು ಘೋರ ಅಪಚಾರ: ಕಾಂಗ್ರೆಸ್ ಸರಕಾರದ ನಡೆ ತಪ್ಪು- ಮಾಜಿ ಸಿಎಂ‌ ಕುಮಾರಸ್ವಾಮಿ

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ.

ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

37 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago