ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…