ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.
ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…