ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

11 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

13 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago