ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago