ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…