ಅಧಿಕೃತ ಪರವಾನಗಿ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

8 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago